ಚಿಕ್ಕಮಗಳೂರು ಜಿಲ್ಲೆಯ ಪವಿತ್ರ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರು ದತ್ತಾತ್ರೇಯ ಪೀಠದಲ್ಲಿ ಹಿಂದು ಅರ್ಚಕರ ನಿಯುಕ್ತಿ ಹಾಗೂ ತ್ರಿಕಾಲ ಪೂಜಾವ್ಯವಸ್ಥೆಗೆ ಆಗ್ರಹಿಸಿ ಡಿ.29 ರ ಒಳಗಾಗಿ ಶ್ರೀಗುರು ದತ್ತಾತ್ರೇಯ ಪೀಠದ ಗುಹಾಂತರ ದೇವಾಲಯದಲ್ಲಿರುವ ಶ್ರೀಗುರು ದತ್ತಾತ್ರೇಯರ ಪಾದುಕೆಗಳಿಗೆ ತ್ರಿಕಾಲ ಪೂಜೆ ಕಾರ್ಯಗಳು ಹಿಂದುಗಳ ಪದ್ದತಿ ಪರಂಪರೆ ಹಾಗೂ ಶ್ರದ್ದಾ ಭಕ್ತಿಗಳಿಗನುಗುಣವಾಗಿ ನಡೆಯುವಂತೆ ಹಿಂದೂ ಅರ್ಚಕರನ್ನು ನೇಮಿಸಬೇಕೆಂದು ಆಗ್ರಹಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ತಹಸಿಲ್ದಾರರ ಮೂಲಕ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಗೌರವಾಧ್ಯಕ್ಷ ಗಣಪತಿ ಭಟ್ ಮಜಿಗುಂಡಿ, ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ, ವಿ.ಹಿಂ.ಪ ಪ್ರಧಾನ ಕಾರ್ಯದರ್ಶಿ ರಂಜಿತ್ ಸುಳ್ಯ , ಬಜರಂಗದಳ ಜಿಲ್ಲಾ ಸಹ ಸಂಯೋಜಕ ಲತೀಶ್ ಗುಂಡ್ಯ, ಬಜರಂಗದಳ ಸಹ ಸಂಯೋಜಕ ವಿಘ್ನೇಶ್, ಸನತ್, ನವೀನ, ಪ್ರದೀಪ್ ಕೊಲ್ಚಾರ್, ಪ್ರಶಾಂತ ಎಲಿಮಲೆ ಉಪಸ್ಥಿತರಿದ್ದರು