ದ.ಕ. ಜಿ.ಪಂ. ಕೃಷಿ ಇಲಾಖೆಯ ವತಿಯಿಂದ ವಿಶ್ವ ಮಣ್ಣು ಆರೋಗ್ಯ ದಿನಾಚರಣೆಯು ಸುಳ್ಯದ ಕೃಷಿ ಇಲಾಖಾ ಕಛೇರಿಯಲ್ಲಿ ಡಿ.5ರಂದು ಜರುಗಿತು.
ಸುಳ್ಯ ಕೃಷಿ ಇಲಾಖೆಯ ತಾಂತ್ರಿಕ ಕೃಷಿ ಅಧಿಕಾರಿ ಮೋಹನ ನಂಗಾರು ಅವರು ವಿಶ್ವ ಮಣ್ಣು ಆರೋಗ್ಯ ದಿನಾಚರಣೆಯ ಕುರಿತು ರೈತರಿಗೆ ಮಾಹಿತಿ ನೀಡಿದರು. ಆತ್ಮ ಯೋಜನೆಯ ಅಧಿಕಾರಿ ಪ್ರಶಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕಿನ ಹಲವು ಕೃಷಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಮಾಹಿತಿ ಪಡೆದುಕೊಂಡರು. ಕೃಷಿ ಇಲಾಖೆಯ ಸಿಬ್ಬಂದಿ ಈಶ್ವರ ಸ್ವಾಗತಿಸಿದರು.