ಫೆ.10 ರಂದು ದರ್ಶನ ಬಲಿ, ಬಟ್ಟಲು ಕಾಣಿಕೆ
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.08 ರಿಂದ ಫೆ.10 ರವರೆಗೆ ವಿವಿಧ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಫೆ 02 ರಂದು ಗೊನೆ ಕಡಿಯಲಾಗುವುದು.
ಫೆ 08 ರಂದು ಬೆಳಿಗ್ಗೆ ,8.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ,ಗಂಟೆ 10.00 ಕ್ಕೆ ಉಗ್ರಾಣ ತುಂಬುವುದು.ಗಂಟೆ 12.00 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ
ಗಂಟೆ 7.30 ರಿಂದ ರಂಗಪೂಜೆಗಳು ನಡೆಯಲಿದೆ.
ಫೆ.09 ರಂದು ಬೆಳಿಗ್ಗೆ ಗಂಟೆ 9.00 ರಿಂದ ಶತರುದ್ರಾಭಿಷೇಕ,ಅಶ್ವಥ್ಥನಾರಾಯಣ ಪೂಜೆ,108 ಕಾಯಿ ಗಣಪತಿ ಹೋಮ ನಡೆಯಲಿದೆ.
ಪೂರ್ವಾಹ್ನ ಗಂಟೆ 10.30 ರಿಂದ ಭಜನೆ,ನಂತರ ಕಲಶಾಭಿಷೇಕಗಳು ನಡೆಯಲಿದೆ.
ಪೂರ್ವಾಹ್ನ ಗಂಟೆ 12.30 ರಿಂದ ಮಹಾಪೂಜೆ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 6
.00 ಕ್ಕೆ ಶ್ರೀ ವಿಷ್ಣು ಸಹಸ್ರನಾಮ,ಲಲಿತ ಸಹಸ್ರನಾಮ ಪಾರಾಯಣ ನಡೆಯಲಿದೆ.
ರಾತ್ರಿ ಗಂಟೆ 7.00 ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಲಿದೆ.
ಫೆ.10 ರಂದು ಪೂರ್ವಾಹ್ನ ಗಂಟೆ 8.30 ಕ್ಕೆ ಕೊಯಿಲ ಉಳ್ಳಾಕುಲು ದೈವಗಳ ಭಂಡಾರ ಬರುವುದು.ಪೂರ್ವಾಹ್ನ ಗಂಟೆ 9.30 ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ ,ಬಟ್ಟಲು ಕಾಣಿಕೆ,ಶುದ್ಧಿ ಕಲಶ ನಡೆಯಲಿದೆ.
ಪೂರ್ವಾಹ್ನ ಗಂಟೆ 12.30 ಕ್ಕೆ ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 10.00 ರಿಂದ ದೈವಗಳ ನಡಾವಳಿ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು
ಫೆ.8 ರಂದು ಸಂಜೆ 6.30 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಚಿವ ಎಸ್.ಅಂಗಾರ ಹಾಗೂ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.
ಸಂಜೆ ಗಂಟೆ 6.00 ರಿಂದ ಪೆರುಮಾಳ್ ಲಕ್ಷ್ಮಣ ಬಳಗದವರಿಂದ ಭಕ್ತಿ- ಗಾಯನ ನಡೆಯಲಿದೆ.
ರಾತ್ರಿ ಗಂಟೆ 8.00 ರಿಂದ ಗೆಳೆಯರ ಬಳಗ ದೇರಾಜೆ ವತಿಯಿಂದ ಶ್ರೀ ಸಾಯಿ ಪುತ್ತೂರು ಅರ್ಪಿಸುವ ಬಲೆ ತೆಲಿಪಾಲೆ ತಂಡದವರಿಂದ ” ಮಕ್ಕರ್” ನಾನ್ ಸ್ಟೋಪ್ ಕಾಮಿಡಿ ಶೋ ನಡೆಯಲಿದೆ.
ಫೆ. 9 ರಂದು ರಾತ್ರಿ ಗಂಟೆ 10.00 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಂಸ್ಕೃತಿಕ ಕಲಾ ವೇದಿಕೆ ಐವರ್ನಾಡು ಮತ್ತು ಗ್ರಾಮದ ವಿವಿಧ ಸಂಘ ಸಂಸ್ಥೆಗಳಿಂದ ನಡೆಯಲಿದೆ.
ಫೆ.10 ರಂದು ಸಂಜೆ ಗಂಟೆ 7.00 ರಿಂದ ಯಕ್ಷಗಾನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ “ಚಕ್ರವ್ಯೂಹ – ಗಿರಿಜಾ ಕಲ್ಯಾಣ”
ನಡೆಯಲಿದೆ.
ಪ್ರಾಯೋಜಕರಾಗಿ ಸಾಂಸ್ಕೃತಿಕ ಕಲಾ ವೇದಿಕೆ ಐವರ್ನಾಡು ,ಲಕ್ಷ್ಮೀನಾರಾಯಣ ಖಂಡಿಗೆಮೂಲೆ ಕಣಿಪ್ಪಿಲ ಸಹಕರಿಸಲಿದ್ದಾರೆ.