ಉಬರಡ್ಕ ಮಿತ್ತೂರು ಗ್ರಾಮದ ಸೂರ್ಯಮನೆ ಮನಮೋಹನ ಎಂಬ ಯುವಕ ಜೂ.18ರಂದು ರಾತ್ರಿ ಬೆಂಗಳೂರಿನಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ.
ಉಬರಡ್ಕ ಮಿತ್ತೂರು ಗ್ರಾಮದ ಸೂರ್ಯಮನೆ ರುಕ್ಮಯ್ಯ ಗೌಡ ಎಂಬವರ ಪುತ್ರರಾದ ಮನಮೋಹನ್ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಕುಟುಂಬ ಸಮೇತರಾಗಿ ನೆಲೆಸಿದ್ದು, ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಮೃತರು ಪತ್ನಿ ನಿತ್ಯ, ಪುತ್ರ ಮನೀಶ್ ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
ಆತ್ಯಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಬೆಂಗಳೂರು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
ಮೃತರ ಪಾರ್ಥೀವ ಶರೀರವನ್ನು ಇಂದು ಸಂಜೆ ಉಬರಡ್ಕದ ಸೂರ್ಯಮನೆಗೆ ತರಲಾಗುತ್ತದೆ ಎಂದು ಮನೆಯವರು ತಿಳಿಸಿದ್ದಾರೆ.