ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು
ಪರವಾನಿಗೆ ಇಲ್ಲದೆ ಕಲ್ಲುಗುಂಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಮಾಂಬುಳಿ ಕ್ಲೀನಿಕ್ ನ್ನು ಆರೋಗ್ಯ ಇಲಾಖೆ ಮುಚ್ಚಿಸಿದ ಘಟನೆ ವರದಿಯಾಗಿದೆ. ಕ್ಲೀನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಲಾಗಿದೆ. ಹಾಗೂ ಕ್ಲಿನಿಕ್ ನ ವಸ್ತುನ್ನು ಮುಟ್ಟುಗೋಲು ಹಾಕಲಾಗಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ರೋಸ್ಲಿ ಮ್ಯಾಥ್ಯೂ ಎಂಬವರು ಪರವಾನಿಗೆ ಇಲ್ಲದೆ ಮಾಂಬುಳಿ ಕ್ಲಿನಿಕ್ ನಡೆಸುತ್ತಿದ್ದು ಈ ಕುರಿತು ಆರೋಗ್ಯ ಇಲಾಖೆಗೆ ದೂರು ಹೋಗಿತ್ತು. ಬಳಿಕ ಆರೋಗ್ಯ ಇಲಾಖೆ ಕಡೆಯಿಂದ ಕ್ಲಿನಿಕ್ ನಢೆಸುತ್ತಿರುವ ಬಗ್ಗೆ ಕರ್ನಾಟಕ ಆಯುರ್ವೇದ, ಯುವಾನಿ ವೈದ್ಯ ಮಂಡಳಿಯಿಂದ ನೋಂದಣಿ ಪ್ರಮಾಣ ಪತ್ರ ಸಲ್ಲಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ 3 ಬಾರಿ ನೋಟೀಸ್ ನೀಡಲಾಗಿತ್ತು. ಆದರೆ ಅದಕ್ಕೆ ಯಾವುದೇ ಪ್ರತಿಕ್ರಿಯೆ ರೋಸ್ಲಿಯವರು ನೋಡಿರಲಿಲ್ಲ. ಕೆಪಿಎಂಇ ನೋಂದಣಿ ಇಲ್ಲದೆ ಕ್ಲಿನಿಕ್ ನಡೆಸುವುದು ಕೆಪಿಎಂಇ ಕಾಯ್ದೆ19 ರ ಪ್ರಕಾರ ಕಾನೂನು ಬಾಹಿರವಾಗಿದೆ. ಆದ್ದರಿಂದ ಕ್ಲಿನಿಕನ್ನು ಶಾಶ್ವತವಾಗಿ ಮುಚ್ಚಲು ಸ್ಥಳೀಯ ಪ್ರಾಧಿಕಾರಕ್ಕೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಿಂದ ನೋಟೀಸ್ ಜಾರಿಯಾಗಿತ್ತು. ಕಳೆದ ವಾರ ಜಿಲ್ಲಾಧಿಕಾರಿಗಳು ಹಾಗೂ ಕೆಪಿಎಂಇ ಪ್ರಾಧಿಕಾರ ಅಧ್ಯಕ್ಷರು ಕೂಡಾ ಕ್ಲೀನಿಕ್ ಮುಚ್ಚಿಸಲು ನೋಟೀಸ್ ಜಾರಿಮಾಡಿದ್ದರು. ಆದರೆ ರೋಸ್ಲಿಯವರು ಕ್ಲಿನಿಕ್ ಮುಚ್ಚಿರಲಿಲ್ಲ.
ಈ ಮಾಹಿತಿ ಪಡೆದ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ಕೆಪಿಎಂಇ ನೋಡಲ್ ಅಧಿಕಾರಿ ಡಾ. ದೀಪಾ ಪ್ರಭು ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಕ್ಲಿನಿಕ್ ಮುಚ್ಚಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ, ಸ್ಥಳೀಯ ಕೆಪಿಎಂಇ ಅಧಿಕಾರಿ ಡಾ.ನಂದಕುಮಾರ್ ಬಿ, ಬಿಪಿಎಂ ಆಶಿಕ್, ಗುಲ್ಜಾರ್ ಬಾನು ಹಾಗೂ ಪೋಲೀಸ್ ಇಲಾಖೆಯ ಅಧಿಕಾರಿಗಳು ಜತೆಗಿದ್ದರು.