ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ಪೂಜಾರಿ ನೆಟ್ಟಾರು ಹಾಗೂ ಕಳಂಜದಲ್ಲಿ ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾಗಿರುವ ಮಸೂದ್ ಕಳಂಜ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಎಂ ಎಲ್ ಸಿ ಫಾರೂಕ್ ಬಿ ಎಂ ನಾಳೆ ಬೆಳಿಗ್ಗೆ 9:30ಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ನಂತರ ಅಲ್ಲಿಂದ ಅವರು ಸುರತ್ಕಲ್ ನಲ್ಲಿ ಹತ್ಯೆಗೊಳಗಾದ ಫಾಝಿಲ್ ರವರ ಮನೆಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.