ಉಬರಡ್ಕ ಮಿತ್ತೂರು ಸಹಕಾರಿ ಸಂಘಕ್ಕೆ ದ. ಕ. ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ

0

 

ಉಬರಡ್ಕಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯನ್ನು ಆ. 5 ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನಗೈದರು. ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ ಪ್ರಶಸ್ತಿ ಸ್ವೀಕರಿಸಿದರು. ಸಹಕಾರಿ ಸಂಘದ ನಿರ್ದೇಶಕರುಗಳಾದ ಪಿ.ಎಸ್. ಗಂಗಾಧರ, ಹರಿಪ್ರಸಾದ್ ಪಾನತ್ತಿಲ ಉಪಸ್ಥಿತರಿದ್ದರು.