ಮಡಪ್ಪಾಡಿ ಸಹಕಾರಿ ಸಂಘಕ್ಕೆ ನಾಲ್ಕನೇ ಬಾರಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ

0

 

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ದ.ಕ. ಜಿಲ್ಲಾ ಡಿಸಿಸಿ ಬ್ಯಾಂಕ್ ಕೊಡಮಾಡುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ‌ಬ್ಯಾಂಕ್ ಪ್ರಶಸ್ತಿ ಲಭಿಸಿದೆ.

ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ಆ.05 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಮತ್ತು ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿಯವರನ್ನು ಪ್ರಶಸ್ತಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ರಾದ ಸೋಮಶೇಖರ ಕೇವಳ, ರಾಜಕುಮಾರ್ ಪೂಂಬಾಡಿ, ಅಜಯ್ ವಾಲ್ತಾಜೆ ಮತ್ತು ಪ್ರಮುಖರಾದ ನಿತ್ಯಾನಂದ ಮುಂಡೋಡಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.