ಕುಕ್ಕುಜಡ್ಕದ ಅಮರ ಸಹಕಾರ ಸದನದಲ್ಲಿ 1568 ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ

0

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು,ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ,1568 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಕುಕ್ಕುಜಡ್ಕ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕ,ಗ್ರಾಮ ಪಂಚಾಯತ್ ಅಮರಮುಡ್ನೂರು, ಸುಳ್ಯ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ಘಟಕ ,ನವಜೀವನ ಸಮಿತಿ, ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಕುಕ್ಕುಜಡ್ಕ ಚೊಕ್ಕಾಡಿ ಕೃಷಿ ಪತ್ತಿನ ಸಹಕಾರ ಸಂಘದ ಅಮರ ಸಹಕಾರ ಸಭಾಭವನದಲ್ಲಿ ಆ.6 ರಂದು 1568 ನೇ
ಶಿಬಿರದ ಉದ್ಘಾಟನೆಯು ನಡೆಯಿತು.

1568 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಯಂ.ಜಿ.ಸತ್ಯನಾರಾಯಣ ರವರು ದೀಪ ಬೆಳಗಿಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿ.ಪಂ.ಮಾಜಿ ಸದಸ್ಯ ಎಸ್.ಎನ್.ಮನ್ಮಥ, ದ.ಕ.2 ಯೋಜನೆಯ ನಿರ್ದೇಶಕ ಪ್ರವೀಣ್ ಕುಮಾರ್, ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯ ಮೇಲ್ತೋಟ, ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ವಿಶ್ವನಾಥ ರೈ ಕಳಂಜ, ಚೊಕ್ಕಾಡಿ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಕರ್ಮಜೆ, ಜನಜಾಗೃತಿ ವಲಯಾಧ್ಯಕ್ಷ ರಾಜಾರಾಮ ಭಟ್ ಬೆಟ್ಟ, ದೊಡ್ಡತೋಟ ವಲಯಾಧ್ಯಕ್ಷ ಭಾಸ್ಕರ ರಾವ್ ಚೆನ್ನಡ್ಕ, ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡ್ತುಗುಳಿ,ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ, ಚೊಕ್ಕಾಡಿ ಒಕ್ಕೂಟದ ಅಧ್ಯಕ್ಷ ಪ್ರಸಾದ್ ಶೇಣಿ, ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ ಕೇನಡ್ಕ, ಜ.ಜಾಗೃತಿ ಸದಸ್ಯ ಸುರೇಶ್ ಕಣೆಮರಡ್ಕ,ಹಿರಿಯರಾದ ಪುಟ್ಟಣ್ಣ ಗೌಡ ನಾಯರ್ ಕಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸವಿತಾ ಮತ್ತು ಹರ್ಷಿತಾ ರವರು ಪ್ರಾರ್ಥಿಸಿದರು. ಸುಳ್ಯ ತಾಲೂಕು ಯೋಜನಾಧಿಕಾರಿ ನಾಗೇಶ್ ಪಿ ಸ್ವಾಗತಿಸಿದರು. ಬೆಳ್ತಂಗಡಿ ಅ.ಕ.ಜ.ವೇದಿಕೆ ಪ್ರಾ.ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೇಂದ್ರ ಒಕ್ಕೂಟದ ಅಧ್ಯಕ್ಷ ಯತೀಶ್ ರೈ ದುಗಲಡ್ಕ ವಂದಿಸಿದರು. ಚಂದ್ರಶೇಖರ ಹೈದಂಗೂರು ಕಾರ್ಯಕ್ರಮ ನಿರೂಪಿಸಿದರು.

ಆ.6 ರಿಂದ 13 ರ ವರೆಗೆ ಶಿಬಿರವು ನಡೆಯಲಿದ್ದು ನವಜೀವನ ಸಮಿತಿ ಸದಸ್ಯರ ಅನಿಸಿಕೆ,ಗುಂಪು ಸಲಹೆ,ಕೌಟುಂಬಿಕ ಸಲಹೆ, ಮಾಹಿತಿ ಮಾರ್ಗದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ,ಭಜನಾ ಕಾರ್ಯಕ್ರಮವು ದಿನ ನಿತ್ಯ ನಡೆಯಲಿರುವುದು.
ಸ್ಥಳೀಯ ಪಂಚಾಯತ್ ಸದಸ್ಯರು, ಸೊಸೈಟಿ
ನಿರ್ದೇಶಕರು,
ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಶಿಬಿರದ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು.