ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

0

 

ಪ್ರಮುಖ ಆರೋಪಿಗಳ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಂಧನವಾಗಿರುವುದಾಗಿ ತಿಳಿದು ಬಂದಿದೆ.
ದ.ಕ ಜಿಲ್ಲಾ ಪೊಲಿಸರು ಬಂಧಿಸಿರುವುದಾಗಿ ತಿಳಿದು ಬಂದಿದ್ದು ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ.
ಆ.10 ರಂದು ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆದಿತ್ತು.

ಮಧ್ಯಾಹ್ನ 12.30 ಕ್ಕೆ ಪೋಲೀಸ್ ಅಧಿಕಾರಿಗಳಿಂದ ಪತ್ರಿಕಾಗೋಷ್ಠಿ

ಇದೇ ವಿಚಾರವಾಗಿ ಇಂದು ಮಧ್ಯಾಹ್ನ 12.30 ಕ್ಕೆ ಮಂಗಳೂರಿನ ಎಸ್.ಪಿ. ಕಚೇರಿ ಯಲ್ಲಿ ಪೋಲೀಸ್ ಹಿರಿಯ ಅಧಿಕಾರಿಗಳು ಪತ್ರಿಕಾಗೋಷ್ಠಿ ಕರೆದು ವಿವರ ನೀಡಲಿದ್ದಾರೆಂದು ತಿಳಿದುಬಂದಿದೆ.