ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ದೇವತಾರಾಧನಾ ಸಮಿತಿಯ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

 

ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾಸಮಿತಿ ,ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಆಶ್ರಯದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ
ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಯ ಬಿಡುಗಡೆ ಕಾರ್ಯಕ್ರಮ ಆ.12 ರಂದು ಕಲ್ಕುಡ ದೈವಸ್ಥಾನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ದೇವತಾರಾಧಾನ ಸಮಿತಿಯ ಅಧ್ಯಕ್ಷ ಸೋಮನಾಥ ಪೂಜಾರಿ ವಹಿಸಿದ್ದರು. ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಸಮಿತಿಯ ಗೌರವಾಧ್ಯಕ್ಷ ಕೆ ಎಸ್ ಚಂದ್ರಶೇಖರ್ ನೆರವೇರಿಸಿದರು. ಸಿದ್ದಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಪಿ. ಕೆ ಉಮೇಶ್ ಕಾರ್ಯಕ್ರಮದ ಬಗ್ಗೆ ಸಲಹೆ ಸೂಚನೆ ನೀಡಿದರು. ವೇದಿಕೆಯಲ್ಲಿ ಸಮಿತಿಯ ಸದಸ್ಯರಾದ ಜಿ ಜಿ ನಾಯಕ್, ಭಾಸ್ಕರ ಗೌಡ, ಶ್ರೀಮತಿ ಲತಾ ಮಧುಸೂಧನ್, ದಿನೇಶ್ ಕುಮಾರ್ ಕೆ ಸಿ ಉಪಸ್ಥಿತರಿದ್ದರು. ಸಮಿತಿಯ ವಿವಿಧ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶಶಿಧರ್ ಎಂ ಜೆ ಸ್ವಾಗತಿಸಿ, ವಂದಿಸಿದರು.