ಆ.15: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೆರಾಜೆಯಲ್ಲಿ ಕಾಲ್ನಡಿಗೆ ಹಾಗೂ ದ್ವಿಚಕ್ರ ವಾಹನ ಜಾಥಾ

0

ಪೆರಾಜೆ ಗ್ರಾಮ ಪಂಚಾಯಿತಿ, ಪೆರಾಜೆ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಜ್ಯೋತಿ ಪ್ರೌಢಶಾಲೆ ಇದರ ಸಂಯುಕ್ತ ಆಶಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆ.15ರಂದು ಜ್ಯೋತಿ ಪ್ರೌಢಶಾಲೆ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 9:30ಕ್ಕೆ ಪೆರಾಜೆ ಗ್ರಾಮ ಪಂಚಾಯಿತಿಯಿಂದ ಜ್ಯೋತಿ ಪ್ರೌಢಶಾಲೆಯವರೆಗೆ ಕಾಲ್ನಡಿಗೆ ಮತ್ತು ದ್ವಿಚಕ್ರ ವಾಹನ ಜಾಥಾ ನಡೆಯಲಿದೆ. ಬೆಳಗ್ಗೆ 10 ರಿಂದ ಜ್ಯೋತಿ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ವಹಿಸಲಿದ್ದು, ಮುಖ್ಯ ಭಾಷಣಕಾರರಾಗಿ ಕರ್ಲಪ್ಪಾಡಿ ಶ್ರೀ ಶಾಸ್ತಾವೆಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಜೇಶ್ ಮೇನಾಲ ಹಾಗೂ ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಜ್ಯೋತಿ ವಿದ್ಯಾಸಂಘದ ಅಧ್ಯಕ್ಷ ಜ್ಞಾನೇಶ್ ನಿಡ್ಯಮಲೆ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ರೇಖಾ ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here