ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ

0

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆ. 15ರಂದು ಆಚರಿಸಲಾಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರಾದ ಪ್ರೊ. ಡಾ. ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರೋತ್ಸವದ ಅಮೃತಮಹೋತ್ಸವದ ಸಂದೇಶ ಸಾರಿದರು.

 

ಕಾರ್ಯಕ್ರಮದಲ್ಲಿ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ

ಎನ್.ಎಸ್.ಎಸ್., ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ, ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.