ಬೂಡು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

0

 

ಬೂಡು ಅಂಗನವಾಡಿ ಕೇಂದ್ರದಲ್ಲಿ ನಡೆದ ಸ್ವಾತಂತ್ರ್ಯ ಅಮೃತ್ ಮಹೋತ್ಸವ ದ ಅಂಗವಾಗಿ ನಡೆದ ಧ್ವಜರೋಹಣವನ್ನು ಭಗವತೀ ಯುವ ಸೇವಾ ಸಂಘದ ಅಧ್ಯಕ್ಷರಾದ ಗೋಪಾಲ ಎಸ್ ನೆರವೇರಿಸಿದರು.

ಕಾರ್ಯಕ್ರಮದಲ್ಲಿಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸೌಮ್ಯ, ಭಗವತೀ ಯುವ ಸೇವಾ ಸಂಘದ ಗೌರವ ಅಧ್ಯಕ್ಷರಾದ ರಾಧಾಕೃಷ್ಣ ರೈ ಬೂಡು, ಎಸ್ ಬಿಐ ನ ನಿವೃತ್ತ ಮೆನೇಜರ್ ಜನಾರ್ದನ್ ನಾಯಕ್, ನ್ಯಾಯವಾದಿ ಭಾಸ್ಕರ್ ರಾವ್, ಬಾಲವಿಕಾಸ ಸಮಿತಿ ಸದಸ್ಯ ಸಂಜೀವ ಆಚಾರಿ,ಯುವಮೋರ್ಚಾ ಕಾರ್ಯದರ್ಶಿ ಸುನಿಲ್ ಕೇರ್ಪಳ, ಭಗವತೀ ಯುವ ಸೇವಾ ಸಂಘದ ಸದಸ್ಯರಾದ ವಿಠಲ್ ರೈ,ಪ್ರದೀಪ್ ರೈ, ಇನ್ನರ್ ವ್ಹೀಲ್ ಕ್ಲಬ್ ನ ಸದಸ್ಯರಾದ ಲತಾ ರೈ ಬೂಡು, ಅರಂತೋಡು ಸಹಕಾರಿ ಬೇಂಕ್ ನ ಮೆನೇಜರ್ ವಾಸುದೇವ ನಾಯಕ್, ಅಶೋಕ್ ಅಡ್ಕಾರ್,ಅಂಗನವಾಡಿ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಬೂಡು ರಾಧಾಕೃಷ್ಣ ರೈ ಸ್ವಾಗತಿಸಿದರು ವಾಸುದೇವ ನಾಯಕ್ ಕಾರ್ಯಕ್ರಮ ನಿರೂಪಿಸಿ ಅಂಗನವಾಡಿ ಕಾರ್ಯಕರ್ತೆ ಕವಿತಾ ವಂದಿಸಿದರು ಈ ಸಂದರ್ಭದಲ್ಲಿ ಎಸ್ ಬಿಐ ನ ನಿವೃತ್ತ ಮೆನೇಜರ್ ಜನಾರ್ದನ್ ನಾಯಕ್ ಅವರು ಅಂಗನವಾಡಿಗೆ ವಾಟರ್ ಫಿಲ್ಟರ್ ನ್ನೂ ಕೊಡುಗೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸುಳ್ಯದ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಅವರಿಗೆ ಗೌರವಾರ್ಪಣೆಯನ್ನು ಮಾಡಲಾಯಿತು ಹಾಗೂ ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ಬಳಿಕ ಸಿಹಿತಿಂಡಿ ಹಂಚಲಾಯಿತು.ಪ್ರಕೃತಿ ಯುವ ಸೇವಾ ಸಂಘದ ಸದಸ್ಯರು ಹಾಗೂ ಅಧ್ಯಕ್ಷರು, ಕಾರ್ಯದರ್ಶಿ ಉಪಸ್ಥಿತರಿದ್ದರು,ಅಂಗನವಾಡಿ ಕೇಂದ್ರದ ಮಕ್ಕಳ ಪೋಷಕರು ಸಹಕರಿಸಿದರು.