ಜಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

0

ಜಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ, ಹಾಗೂ ಅವರ ಬಲಿದಾನಗಳ ಬಗ್ಗೆ ಮಾತನಾಡಿದರು.
ನಗರ ಪಂಚಾಯತ್ ಸದಸ್ಯರುಗಳಾದ ಶಿಲ್ಪಾ ಸುದೇವ್, ಬಾಲಕೃಷ್ಣ ಭಟ್ ಕೊಡಂಕೆರಿ, ರೋಹಿತ್ ಕೋಯಿಂಗೋಡಿ, ಅಂಗನವಾಡಿ ಕಾರ್ಯಕರ್ತೆ ತಿರುಮಲೇಶ್ವರಿ, ಜಯನಗರ ಮದ್ರಸಾ ಕಮಿಟಿ ಅಧ್ಯಕ್ಷ ಜಾಹೀರ್ ಈ ಸಂದರ್ಭದಲ್ಲಿ ಮಾತನಾಡಿ ಶುಭ ಹಾರೈಸಿದರು. ವಿಕ್ರಮ ಯುವಕ ಮಂಡಲದ ಅಧ್ಯಕ್ಷರು ಮತ್ತು ಮಾಜಿ ಅಧ್ಯಕ್ಷರುಗಳು, ಸದಸ್ಯರು, ಪುಟಾಣಿ ಮಕ್ಕಳ ಪೋಷಕರು, ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರವೀಣ್ ಕುಮಾರ್ ಎ ಎಂ, ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸುರೇಂದ್ರ ಕಾಮತ್ ವಂದಿಸಿದರು.