ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

 

ಕಳಂಜ ಬಾಳಿಲ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದಲ್ಲಿ ಆ. 15ರಂದು ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಭಾರತ ದೇಶದ ಮುಕ್ತಿಗಾಗಿ ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸುತ್ತ ಅವರ ಬಲಿದಾನ ವ್ಯರ್ಥವಾಗದಂತೆ ಪ್ರತಿಜ್ಞೆ ಮಾಡೋಣವೆಂದರು. ಆರಂಭದಲ್ಲಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಮೇಶ ನಾಯಕ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ ಕುಮಾರ್, ಸಂಘದ ಉಪಾಧ್ಯಕ್ಷೆ ಮಾಲಿನಿ ಪ್ರಸಾದ್, ಸಂಘದ ನಿರ್ದೇಶಕರುಗಳು, ಪಂಚಾಯತ್ ಉಪಾಧ್ಯಕ್ಷರಾದ ಗಣೇಶ ರೈ, ಸದಸ್ಯರು, ಸಂಘದ ಮಾಜಿ ಅಧ್ಯಕ್ಷರಾದ ಎನ್. ವಿಶ್ವನಾಥ ರೈ ಹಾಗೂ ಊರ ಹಿರಿಯರು, ಸ್ಥಳೀಯ ಶಾಲಾ ಮಕ್ಕಳು ಭಾಗವಹಿಸಿದ್ದರು.