ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಣಮ್ಯ ಎನ್ ಆಳ್ವ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೂರನೇ ಸುತ್ತಿನ ಸ್ಪರ್ಧೆಗೆ ಆಯ್ಕೆ

0

ಜವಾಹರ್ ಲಾಲ್ ನೆಹರು ತಾರಾಲಯ ಬೆಂಗಳೂರು, ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್, ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ರೋಟರಿ ವಿದ್ಯಾ ಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿನಿ ಪ್ರಣಮ್ಯ. ಎನ್ ಆಳ್ವ ಮೊದಲ ಸುತ್ತಿನಲ್ಲಿ ಪ್ರಶಂಸನೀಯ ಪ್ರದರ್ಶನ ನೀಡಿ ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಪುಸ್ತಕಗಳು ಹಾಗೂ ಪ್ರಮಾಣ ಪತ್ರ ಸ್ವೀಕರಿಸಿ, ಎರಡನೇ ಸುತ್ತಿನ ಸ್ಪರ್ಧೆಗೂ ಸ್ಪರ್ಧಿಸಿ ಇದೀಗ ಮೂರನೇ ಸುತ್ತಿನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

 

ಇವರಿಗೆ ಶಿಕ್ಷಕಿ ಉಷಾ. ಕೆ. ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾಸಂಸ್ಥೆಯ ಸಂಚಾಲಕರು, ಮುಖ್ಯ ಶಿಕ್ಷಕಿ, ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಶುಭ ಹಾರೈಸಿದರು.ಇವರು ನಿಶಾಂತ್ ಆಳ್ವ ಹಾಗೂ ಸುಪರ್ಣ ಎನ್. ಆಳ್ವ ದಂಪತಿಗಳ ಪುತ್ರಿ.