ಚೆಂಬು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸರಕಾರಿ ಪ್ರೌಢ ಶಾಲೆ ಚೆoಬು ಇಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಆ. 13ರಂದು ಬೆಳಿಗ್ಗೆ ಪ್ರಗತಿಪರ ಕೃಷಿಕರಾದ ಹೊಸೂರು ಚಂದ್ರಶೇಖರ ರವರು ಧ್ವಜರೋಹಣ ನೆರವೇರಿಸಿದರು.

ನಂತರ ವಿದ್ಯಾರ್ಥಿಗಳು,ಶಿಕ್ಷಕರು ಮತ್ತು ಸಾರ್ವಜನಿಕರೊಂದಿಗೆ ಸ್ವಾತಂತ್ರ್ಯ ಜಾಥ ಕಾರ್ಯಕ್ರಮವು ನಡೆಯಿತು. ಆ.15 ರಂದು ಧ್ವಜಾರೋಹಣ ಕಾರ್ಯವನ್ನು ನಿವೃತ ಪೊಲೀಸ್ ಅಧಿಕಾರಿಯಾದ ಮೋನಪ್ಪ ನಾಗನ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ರಮೇಶ್ ಕುಮಾರ್ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಅರೆಭಾಷೆ ಅಕಾಡಮಿ ಮಾಜಿ ಸದಸ್ಯರಾದ ಸಂಗೀತಾ ರವಿರಾಜ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷರು ಮುಖ್ಯ್ಯೊಪಾಧ್ಯರು ಮತ್ತು ಸದಸ್ಯರುಗಳು, ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ 2021-22ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾದ ಇಂಚರ ಮತ್ತು ಸಿಂಚನ ರವರನ್ನು ಸನ್ಮಾನಿಸಲಾಯಿತು ಮತ್ತು ಇತರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.ಮುಖ್ಯ್ಯೊಪಾಧ್ಯಯರಾದ ದೇಜಮ್ಮ ರವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕರಾದ ರಂಜಿತ್ ರವರು ಕಾರ್ಯಕ್ರಮ ನಿರೂಪಿಸುವುದರೊಂಗೆ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಶಿಕ್ಷಕಿ ಕಾಮಕ್ಷಿ ಯವರು ವಂದನಾರ್ಪಣೆ ಸಲ್ಲಿಸಿದರು.