ಆ.18: ಬೊಳ್ಳಾಜೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ವಿವಿಧ ಆಟೋಟ ಸ್ಪರ್ಧೆ

0

ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೊಳ್ಳಾಜೆ ಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ 28ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಆ.18ರಂದು ನಡೆಯಲಿದೆ.

Krishna Janmashtami 2022, Krishna Jayanthi 2022, Gokulashtami Pooja Date

ಬೆಳಿಗ್ಗೆ 8.00 ಗಂಟೆಗೆ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಕೊರತ್ತೋಡಿ ಇದರ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ನಿವೃತ್ತ ಸೈನಿಕ ಉಮೇಶ್ ದೊಡ್ಡತೋಟ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಲಿದ್ದಾರೆ. ಶೈಕ್ಷಣಿಕ ಸಮನ್ವಯ ಸಮಿತಿಯ ಸಂಚಾಲಕರಾದ ಗೋಪಾಲಕೃಷ್ಣ ಭಟ್ ಮುಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ಯಾಮಲ ಎ.ವಿ., ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಶೆಟ್ಟಿ ಉಬರಡ್ಕ, ಡಾ| ಜಯಪ್ರಸಾದ್ ಪಾರೆ, ಶಿಕ್ಷಕ ಸೀತಾರಾಮರವರು ಉಪಸ್ಥಿತಲಿರಲಿದ್ದಾರೆ.

ಬಳಿಕ ಸಾರ್ವಜನಿಕ ರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.
ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ‌ ಕಿಲಾರ್ಕಜೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಚ ವಿಷ್ಣು ಭಟ್ ಮೂಲೆತೋಟ, ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಅನಂತ ಭಟ್ ಕನಿಯಾಲ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಚ ದಯಾನಂದ ಕೊರತ್ತೋಡಿ, ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ, ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲದ ಅಧ್ಯಕ್ಚ ಮನೋಹರ ರೈ, ಶೌರ್ಯ ವಿಪತ್ತು ಘಟಕ ದೊಡ್ಡತೋಟ ಇದರ ಸಂಯೋಜಕ ವೆಂಕಟೇಶ ಡಿ.ಜಿ. ಆಗಮಿಸಲಿದ್ದಾರೆ. ಇದೇ ಸಂದರ್ಭ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಗುತ್ತದೆ.