ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿಗೆ ಅನುದಾನಕ್ಕಾಗಿ ಸಚಿವ ಅಂಗಾರರ ನೇತೃತ್ವದಲ್ಲಿ ನಿಯೋಗ

0

 

ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿ ಗಾಗಿ ಅನುದಾನಕ್ಕಾಗಿ ಸಚಿವ ಅಂಗಾರರ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವರ ಮನವಿ ಮಾಡಿಕೊಳ್ಳಲಾಗಿದೆ.

ಲೋಕೋಪಯೋಗಿ ಇಲಾಖೆ ಸಚಿವರಾದ ಸಿ ಸಿ ಪಾಟೀಲ್ ರವರನ್ನು ಅವರ ವಿಕಾಸ ಸೌಧದ ಕಛೇರಿಯಲ್ಲಿ ಸಚಿವರಾದ ಅಂಗಾರ ರವರ ನೇತೃತ್ವದಲ್ಲಿ ಬೇಟಿಯಾಗಿ ಸುಳ್ಯ ಕ್ಷೇತ್ರದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿಗೆ, ಹಾಗೂ ನೆರೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಮೂಲಭೂತ ವ್ಯವಸ್ಥೆಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ನೀಡುವಂತೆ ಕೋರಿಕೆ ಸಲ್ಲಿಸಿ , ಹಾನಿಗಳ ಗಂಭೀರತೆಯ ಬಗ್ಗೆ ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆ‌.ಎಫ್.ಡಿ.ಸಿ ನಿಗಮ ಅಧ್ಯಕ್ಷ ಎ. ವಿ . ತೀರ್ಥರಾಮ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಉಪಸ್ಥಿತರಿದ್ದರು.