ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವ ಸಹಾಯ ಸಂಘದ ಸದಸ್ಯರಿಂದ ಕೋಟೆ ದೇವಸ್ಥಾನದಲ್ಲಿ ಶ್ರಮದಾನ

0

ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ
ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವ ಸಹಾಯ ಸಂಘದ ಸದಸ್ಯರಿಂದ ಕೋಟೆ ದೇವಸ್ಥಾನದಲ್ಲಿ ಶ್ರಮದಾನಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರಿಂದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸಮಾಧಾನ ಇತ್ತೀಚೆಗೆ ನಡೆಯಿತು.

ಭಾಗವಹಿಸಿದ ಸದಸ್ಯರು ಆರಂಭದಲ್ಲಿ ಧ್ವಜ ವಂದನೆ ಸಲ್ಲಿಸಿದರು. ಬಳಿಕ ದೇವಾಲಯದ ವಠಾರದಲ್ಲಿ ಸ್ವಚ್ಚತಾ ಕಾರ್ಯ ನೆರವೇರಿಸಿದರು. ಒಕ್ಕೂಟದ ಅಧ್ಯಕ್ಷ ರಘುನಾಥ, ಸೇವಾ ಪ್ರತಿನಿಧಿ ಸೌಮ್ಯ, ಕಳಂಜ ಗ್ರಾ.ಪಂ ಸದಸ್ಯೆ ಸುಧಾ, ಸ್ವಸಹಾಯ ಸಂಘದ ಸದಸ್ಯರಾದ ಶಾರದಾ, ಶೋಭಾ, ಚಂದ್ರಿಕಾ, ಗೀತಾ, ಗಂಗು, ಲಲಿತ, ಜಯಂತಿ, ಸುಮಿತ್ರ ಭಾಗವಹಿಸಿದ್ದರು. ದೇವಸ್ಥಾನದ ಅರ್ಚಕರಾದ ಮಂಜುನಾಥ ಭಟ್ ಸಹಕರಿಸಿದರು.