ಕನಕಮಜಲು: ಸೋಣಂಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0

 

 

ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಗೆ ದ್ವಿತೀಯ ಸಮಗ್ರ ಪ್ರಶಸ್ತಿ

ಸೋಣಂಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ‌ಯು ಕನಕಮಜಲಿನ ಶ್ರೀ ನರಿಯೂರು ರಾಮಣ್ಣ ಗೌಡ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.1ರಂದು ಜರುಗಿದ್ದು, ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಒಟ್ಟು 28 ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕಿರಿಯ ಪ್ರಾಥಮಿಕ ವಿಭಾಗ ಹಾಗೂ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ.
ಕನಕಮಜಲು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಹಮೀದ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶೇಷಮ್ಮ ಅವರು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ, ಕನಕಮಜಲು ಗ್ರಾ.ಪಂ. ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕುತ್ಯಾಳ, ಶಿಕ್ಷಣ ಸಂಯೋಜಕ ವಸಂತ ಏನೆಕಲ್, ಗಣೇಶ್ ಕಜೆಗದ್ದೆ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.