ಅ.2 ರಿಂದ 10 ಸುಳ್ಯ ದಸರಾ ಉತ್ಸವ

0

ಆಮಂತ್ರಣ ಪತ್ರ ಬಿಡುಗಡೆ

ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಮತ್ತು ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಆಶ್ರಯದಲ್ಲಿ ಅ.2 ರಿಂದ ಅ.10 ರವರೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬ ವೇದಿಕೆಯಲ್ಲಿ ನಡೆಯುವ ದಸರಾ ಉತ್ಸವದ ಆಮಂತ್ರಣ ಪತ್ರ ಇಂದು ಬಿಡುಗಡೆ ಮಾಡಲಾಯಿತು.


ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಆಮಂತ್ರಣ ಬಿಡುಗಡೆಗೊಳಿಸಿ ಶುಭಹಾರೈಸಿದರು. ಎಸ್೬ ಗೌರವಾಧ್ಯಕ್ಷ ಗೋಕುಲದಾಸ್ ಪ್ರಾಸ್ತಾವಿಕವಾಗಿ ಮತನಾಡಿದರು. ಅಧ್ಯಕ್ಷ ಚಿದಾನಂದ ವಿದ್ಯನಗರ ಸ್ವಾಗತಿಸಿದರು. ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.