ಸೆ.11ರಂದು ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಶತಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

0

 

 

 

 

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಶತಮಾನೋತ್ಸವದ ಹೊಸ್ತಿಲಿನಲ್ಲಿದ್ದು ಇದರ ಆಮಂತ್ರಣ ಪತ್ರಿಕೆಯು ಸೆ.11ರಂದು ಬಿಡುಗಡೆಗೊಳ್ಳಲಿದೆ.
ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.11ರಂದು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಜರುಗಲಿದ್ದು, ಈ ಸಂದರ್ಭದಲ್ಲಿ ತೂಗುಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ಶತಮಾನೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅವರು ತಿಳಿಸಿದ್ದಾರೆ.