ಸೆ.10 ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಶಿ ಸುಳ್ಯಕ್ಕೆ

0

ದ. ಕ. ಜಿಲ್ಲಾ ಮಟ್ಟದ ತನಿಖಾಧಿಕಾರಿಗಳಿಗೆ ತನಿಖೆಯ ವಿವಿಧ ಹಂತಗಳ ಕುರಿತು ಮಾಹಿತಿ ಕಾರ್ಯಾಗಾರ ಮತ್ತು ಗೌರವಾರ್ಪಣೆ

 

 

ಜಿಲ್ಲಾ ಪೊಲೀಸ್ ಇಲಾಖೆ ದಕ್ಷಿಣ ಕನ್ನಡ, ಅಭಿಯೋಜನಾ ಇಲಾಖೆ ಮಂಗಳೂರು ವಲಯದ ದ ಕ, ಪೊಲೀಸ್ ಉಪಾಧೀಕ್ಷಕರ ಕಛೇರಿ ಪುತ್ತೂರು, ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿ ಸುಳ್ಯ, ಪೊಲೀಸ್ ಇಲಾಖೆ ಸುಳ್ಯ ಇದರ ಸಂಯುಕ್ತ ಆಶಯದಲ್ಲಿ ಸೆಪ್ಟೆಂಬರ್ 10 ರಂದು ತನಿಖೆ ಮತ್ತು ಅಧಿಕಾರಿ ಸಾಕ್ಷ್ಯ ಗಳ ಮಹತ್ವ ಎಂಬ ವಿಷಯದ ಕುರಿತು ದ. ಕ. ಜಿಲ್ಲಾ ಮಟ್ಟದ ತನಿಖಾಧಿಕಾರಿಗಳಿಗೆ ತನಿಖೆಯ ವಿವಿಧ ಹಂತಗಳ ಕುರಿತು ಮಾಹಿತಿ ಕಾರ್ಯಾಗಾರ ಮತ್ತು ಗೌರವಾರ್ಪಣೆ ಅಂಬಟಡ್ಕ ಕೆವಿಜಿ ಆಯುರ್ವೇದ ಫಾರ್ಮ್ ಮತ್ತು ರಿಸರ್ಚ್ ಸೆಂಟರ್ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಶಿ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಣೆ ಋಷಿಕೇಶ್ ಭಗವಾನ್ ವಹಿಸಲಿದ್ದು ವೇದಿಕೆಯಲ್ಲಿ ಗೌರವ ಉಪಸ್ಥಿತರಾಗಿ ಬೆಂಗಳೂರು ಲಘು ವ್ಯವಹಾರಗಳ ನ್ಯಾಯಾಲಯ ಮತ್ತು ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಸೋಮಶೇಖರ ಎ, ಸುಳ್ಯ ಸಿ ಜೆ ಜೆ ಎಂ ಎಫ್ ಸಿ ಸಿವಿಲ್ ನ್ಯಾಯಾಧೀಶೆ ಅರ್ಪಿತಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ಆಯುಕ್ತರು ಕುಮಾರಚಂದ್ರ, ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸುಳ್ಯ ತಹಶೀಲ್ದಾರ್ ಕು. ಅನಿತಾ ಲಕ್ಷ್ಮಿ, ಪುತ್ತೂರು ಡಿ ವೈ ಎಸ್ ಪಿ ವೀರಯ್ಯ ಹಿರೇಮಠ, ಡಿ ಸಿ ಆರ್ ಬಿ ವಿಭಾಗದ ಡಿವೈಎಸ್ಪಿ ಡಾ. ಪಿ. ಗಾನ ಕುಮಾರ್, ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಉಪಸ್ಥಿತರಿರುತ್ತಾರೆ.
ಈ ಸಂದರ್ಭದಲ್ಲಿ ಪುತ್ತೂರು ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಅಡ್ಯಂತಾಯ, ಸಂಪನ್ಮೂಲ ವ್ಯಕ್ತಿಯಾಗಿ ಅಪರಾಧಿಕ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸುವ ವಿಧಾನ, ತನಿಖೆ ದೋಷರೋಪಣ ಪತ್ರ ವಿಷಯದ ಕುರಿತು ಮಾಹಿತಿ ಕಾರ್ಯಾಗಾರ ನಡೆಸಲಿದ್ದಾರೆ. ಅಪರಾಧಿಕ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿನ ಮೌಕಿಕ ಸಾಕ್ಷ್ಯದ ಮಹತ್ವ ಸಿ ಆರ್ ಪಿ 164 ಮತ್ತು ವಿಷಯ ತಜ್ಞರ ಸಾಕ್ಷ್ಯದ ಮಹತ್ವ ಹಾಗೂ ಅಬಕಾರಿ ತಕ್ಷೇರಿಗೆ ಸಂಬಂಧಿಸಿದಂತೆ ಎಫ್ ಐ ಆರ್ ತನಿಖೆ ಮತ್ತು ದೋಷಾರೋಪಣ ಪತ್ರ ಸಲ್ಲಿಕೆ, ಇನ್ವೆಂಟರಿ ವರದಿ ಬಗ್ಗೆ ಮಾಹಿತಿ ಕಾರ್ಯಗಾರ ನೀಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ನೇತೃತ್ವವನ್ನು ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಮತ್ತು ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ವಹಿಸಲಿದ್ದಾರೆ. ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.