ಸಂಪಾಜೆ : ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಗಲಿದ ಮಾಜಿ ನಿರ್ದೇಶಕರಿಗೆ ಶ್ರದ್ಧಾಂಜಲಿ

0

 

 

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಈ ಹಿಂದೆ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿ ,ಈಗ ಅಕಾಲಿಕವಾಗಿ ನಿಧನ ಹೊಂದಿದ ದಿ.ಗಾಂಧಿಪ್ರಸಾದ್ ಬಂಗಾರಕೋಡಿ ಮತ್ತು ದಿ.ರತ್ನಾಕರ ದೊಡ್ಕಜೆ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸೆ. 10 ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಸಂಸ್ಥೆಯ ಅದ್ಯಕ್ಷರಾದ  ಅನಂತ್ ಊರುಬೈಲುರವರು ಮೃತ ನಿರ್ದೇಶಕರು ತಮ್ಮ ಆಡಳಿತದ ಅವಧಿಯಲ್ಲಿ ಸಂಘದ ಅಭಿವೃದ್ಧಿಗೆ ನೀಡಿದ ಸೇವೆಯನ್ನು ಸ್ಮರಿಸಿ, ನುಡಿನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ  ರಾಜಾರಾಮ ಕಳಗಿ ,ಸಿಇಒ  ಬಿ.ಕೆ.ಆನಂದ ,ಆಡಳಿತ ಮಂಡಳಿ ನಿರ್ದೇಶಕರು ,ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.