ಜೇಸಿಐ ಸುಳ್ಯ ಪಯಸ್ವಿನಿಯ ಜೇಸಿಐ ಸಪ್ತಾಹ ದ ಅಂಗವಾಗಿ ದಿನಾಂಕ ಸೆ. 12ರಂದು ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘ ಮಂಡೆಕೋಲಿನಲ್ಲಿ ನವೋದಯ ಸ್ವಸಹಾಯ ಸಂಘಗಳ ಪದಾಧಿಕಾರಿಗಳಿಗೆ ಸಾಬೂನು ಹಾಗೂ ಫಿನಾಯಿಲ್ ತಯಾರಿಕೆ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ಮಹಿಳೆಯರಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.
ಉದ್ಘಾಟನೆಯನ್ನು ಮಂಡೆಕೋಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿನುತಾ ಪಾತಿಕಲ್ಲು ನೆರವೇರಿಸಿ ಶುಭಹಾರೈಸಿದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಜೇಸಿ ರಂಜಿತ್ ಕುಕ್ಕೆಟ್ಟಿ ವಹಿಸಿದ್ದರು.
ವೇದಿಕೆಯಲ್ಲಿ ಸ್ಥಳೀಯ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ರಾಮಕೃಷ್ಣ ರೈ ಪೇರಾಲುಗುತ್ತು, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀ ಉಧಯ ಕುಮಾರ್, ನಮ್ಮ ಘಟಕದ ಪೂರ್ವಾದ್ಯಕ್ಷ ಜೇಸಿ ಚೆನ್ನಕೇಶವ ಜಾಲ್ಸೂರು, ನವೋದಯ ಸ್ವಸಹಾಯ ಸಂಘಗಳ ಪ್ರೇರಕಿ ಸಂಧ್ಯಾ ಮಂಡೆಕೋಲು ಮುಂತಾದವರು ಉಪಸ್ಥಿತರಿದ್ದರು.
ಜೇಸಿಐ ಸಪ್ತಾಹ ನಿರ್ದೇಶಕಿ ಜೇಸಿ ಶೋಭಾ ಅಶೋಕ್ ಚೂಂತರ್, ಯೋಜನಾ ನಿರ್ದೇಶಕ ಜೇಸಿ ಸಂಪತ್ ಕುಮಾರ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಜೇಸಿ ಕುಮಾರ್ ವಂದಿಸಿದರು