ಆರು ಮಂದಿ ಶಿಕ್ಷಕರಿಗೆ ಮಲೆನಾಡ ಸಿರಿ ಶಿಕ್ಷಕ ಪ್ರಶಸ್ತಿ

0

 

ಸುಳ್ಯದ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಆರು ಮಂದಿ ಶಿಕ್ಷಕರಿಗೆ ಮಲೆನಾಡ ಸಿರಿ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

 

 

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಸಹಶಿಕ್ಷಕ ಚಂದ್ರಶೇಖರ ಕೆ.ಎಸ್., ಸಂಪಾಜೆ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ, ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ, ಸುಳ್ಯ ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ ಉಷಾ, ಕೋಲ್ಚಾರ್ ಸರಕಾರಿ ಶಾಲಾ ಸಹಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಕೆ.ಡಿ., ಹಾಗೂ ಕೊಲ್ಲಮೊಗ್ರು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಯವರನ್ನು ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ ಎಂದು ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಜ್ ಕಟ್ಟೆಕಾರ್, ನಿರ್ದೇಶಕ ಸಿದ್ದಿ ಕೊಕ್ಕೋ ತಿಳಿಸಿದ್ದಾರೆ.