ಕೆಪಿಸಿಸಿ ಸದಸ್ಯರಾಗಿ ಭರತ್ ಮುಂಡೋಡಿ, ಎಚ್.ಎಂ.ನಂದ ಕುಮಾರ್

0

 

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಸದಸ್ಯರಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭರತ್ ಮುಂಡೋಡಿ ನೇಮಕಗೊಂಡಿದ್ದಾರೆ. ಇವರು ಕಳೆದ ಅವಧಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ನಿಂದ ಮಾಜಿ ಪುರಸಭಾ ಸದಸ್ಯ ಎಚ್.ಎಂ.ನಂದಕುಮಾರ್ ಕೆಪಿಸಿಸಿ ಸದಸ್ಯರಾಗಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿರುವ ನಂದಕುಮಾರ್ ಕಡಬ ಬ್ಲಾಕ್ ನ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.