ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆ ಮಹಾಸಭೆ

0

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇದರ ವಾರ್ಷಿಕ ಮಹಾಸಭೆಯು‌ ಸಂಸ್ಥೆಯ ಅಧ್ಯಕ್ಷರಾದ ಆರ್.ಕೆ. ಭಟ್ ಕುರುಂಬುಡೇಲುರವರ ಅಧ್ಯಕ್ಷತೆಯಲ್ಲಿ ಪುತ್ತೂರು ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರಿ ಸಂಘದ ಸಭಾಭವನದಲ್ಲಿ ಸೆ. 25ರಂದು ನಡೆಯಿತು.

ಸಭೆಯಲ್ಲಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಸುವರ್ಣ ವಾರ್ಷಿಕ ವರದಿ ಮಂಡಿಸಿದರು. ಲೆಕ್ಕಾಧಿಕಾರಿ ವಿಧಾತ ಆರ್. ಭಟ್ ವಾರ್ಷಿಕ ಲೆಕ್ಕಾಚಾರ ಮಂಡಿಸಿದರು. ಸಂಸ್ಥೆಯ ಅಧ್ಯಕ್ಷರು ಮುಂದಿನ ಕಾರ್ಯ ಯೋಜನೆ ಹಾಗೂ ಸಂಸ್ಥೆಯ ದ್ಯೇಯೋದ್ದೇಶಗಳ ಬಗ್ಗೆ ಮಾತನಾಡಿದರು. ಹಿರಿಯ ನಿರ್ದೇಶಕರಾದ ಮೂಲಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಸುಳ್ಯ ಪುತ್ತೂರು ಹಾಗೂ ಕಡಬ ತಾಲೂಕಿನ ಸದಸ್ಯರುಗಳು, ನಿರ್ದೇಶಕರುಗಳು ಉಪಸ್ಥಿತರಿದ್ದರು. ಸಂಸ್ಥೆಯು ಮೂರನೇ ವರ್ಷದಲ್ಲಿ ಸದಸ್ಯರ ಸಲಹೆ ಸಹಕಾರದಿಂದ ಉತ್ತಮವಾಗಿ ಮುನ್ನಡೆಯುತ್ತದೆ.