ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ
ಜುಲೈ ತಿಂಗಳಿನಲ್ಲಿ ಹತ್ಯೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದಿ. ಪ್ರವೀಣ್ ರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ನೇಮಕಾತಿ ಮಾಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು.