ಅಮೈಮಡಿಯಾರು: ಅಮರ ಸಮರ ನಾಯಕ ಕೆದಂಬಾಡಿ ರಾಮಯ್ಯ ಗೌಡ ನಾಟಕ ತಂಡಕ್ಕೆ ಗೌರವಾರ್ಪಣೆ

0

 

ಸೆ.25 ರಂದು ಜ್ಞಾನಧಾಮ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಊರವರ ಹಾಗೂ ದಾನಿಗಳ ಸಹಕಾರದಿಂದ ನಡೆದ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ದ್ವಾರ ಮತ್ತು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ 1837 ರ ಅಮರ ಸೈನ್ಯದ ಚಾರಿತ್ರಿಕ ಉಬ್ಬುಶಿಲ್ಪಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಡೆದ ಅಮರ ಸಮರ ನಾಯಕ ಕೆದಂಬಾಡಿ ರಾಮಯ್ಯ ಗೌಡ ನಾಟಕ ನಿರ್ದೇಶಕ ಕೃಷ್ಣಪ್ಪ ಬಂಬಿಲ, ನಾಟಕ ತಂಡದ ವ್ಯವಸ್ಥಾಪಕ ತೇಜಕುಮಾರ್ ಬಡ್ಡಡ್ಕ, ಕೆದಂಬಾಡಿ ರಾಮಯ್ಯ ಗೌಡ ಪಾತ್ರಧಾರಿ ಪ್ರಸಾದ್ ಕಾಟೂರು ಹಾಗೂ ತಂಡಕ್ಕೆ ಗೌರವಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ದಾಮೋದರ ಮಸುವೆಗದ್ದೆ, ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ನಾಟಕ ರಚನೆಕಾರ ಹಾಗೂ ಸಾಹಿತಿ ಎ.ಕೆ ಹಿಮಕರ, ನಾರಾಯಣ ಶೇಡಿಕಜೆ ಮೊದಲಾದವರು ಉಪಸ್ಥಿತರಿದ್ದರು.