ಆಲೆಟ್ಟಿ ಸದಾಶಿವ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ

0

 

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ಇಂದು ಬೆಳಗ್ಗೆ ಅರ್ಚಕ ಹರ್ಷಿತ್ ಬನ್ನಿಂತಾಯ ರವರ ನೇತೃತ್ವದಲ್ಲಿ ವಿಶೇಷ ಅಭಿಷೇಕ ಹಾಗೂ ಪೂಜೆಯು ನಡೆಯಿತು. ಭಕ್ತಾದಿಗಳು ಅರ್ಪಿಸಿದ ಕ್ಷೀರ ಮತ್ತು ಸೀಯಾಳದ ಅಭಿಷೇಕ ನಾಗನಿಗೆ ಸಮರ್ಪಿಸಿದರು.

ಬಳಿಕ ಪೂಜೆಯು ನಡೆದು ಪ್ರಸಾದ ವಿತರಣೆಯಾಯಿತು. ಈ ಸಂದರ್ಭದಲ್ಲಿ ವ್ಯ.ಸ.ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಸೇ.ಸ.ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು, ಮಾಜಿ ಅಧ್ಯಕ್ಷ ಪ್ರಸನ್ನ ಕೆ.ಸಿ ಬಡ್ಡಡ್ಕ ಮತ್ತು ಸಮಿತಿ ಸದಸ್ಯರು,ಭಜನಾ ಸಂಘ ದ ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.