ಸುಳ್ಯ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್, ಶ್ರೀ ಗುರು ರಾಘವೇಂದ್ರ ಮಠದ ಸಹಯೋಗದಲ್ಲಿ ಶ್ರೀ ಗುರು ರಾಯರ 351 ನೇ ಆರಾಧನಾ ಮಹೋತ್ಸವ ಆ.13 ರಂದು ಸುಳ್ಯ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಜರುಗಲಿರುವುದು.
ಮಠದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀ ಹರಿ ಎಳಚಿತ್ತಾಯ ರವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಲಿದೆ. ಪೂ.ಗಂಟೆ 10.00 ರಿಂದ ಶರಾಘಾತ ಎಂಬ ಯಕ್ಷಗಾನ ತಾಳಮದ್ದಳೆ, ನಂತರ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆ ಯಾಗಲಿರುವುದು.
ಸಂಜೆ ಗಂಟೆ 4.00 ರಿಂದ ಭಜನಾ ಕಾರ್ಯಕ್ರಮ, ಬಳಿಕ ಪಲ್ಲಕ್ಕಿ ಸೇವೆ, ತೊಟ್ಟಿಲ ಸೇವೆ, ಅಷ್ಟಾವಧಾನ ,ಮಹಾಪೂಜೆ ಪ್ರಸಾದ ವಿತರಣೆಯಾಗಿ ರಾತ್ರಿ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿರುವುದು ಎಂದು ಟ್ರಸ್ಟ್ ಅಧ್ಯಕ್ಷ ಶ್ರೀ ಕೃಷ್ಣ ಸೋಮಯಾಗಿ ಯವರು ತಿಳಿಸಿರುತ್ತಾರೆ.