ಸುಳ್ಯ ತಾಲೂಕು ಕಚೇರಿಯಲ್ಲಿ ಸಂವಿಧಾನ ದಿನಾಚರಣೆಯನ್ನು ನ.೨೬ರಂದು ಆಚರಿಸಲಾಯಿತು.
ಸುಳ್ಯ ತಹಶೀಲ್ಧಾರ್ ಕು.ಅನಿತಾಲಕ್ಷ್ಮೀಯವರು ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಂವಿಧಾನದ ಮಹತ್ವದ ಕುರಿತು ಮಾತನಾಡಿದರು. ಬಳಿಕ ಸಂವಿಧಾನದ ಆಶಯದಂತೆ ಕೆಲಸ ನಿರ್ವಹಿಸುವ ಕುರಿತು ಕಚೇರಿ ಸಿಬ್ಬಂದಿಗಳಿಗೆ ಪ್ರತಿಜ್ಞೆ ಬೋಧಿಸಿದರು.
ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್., ಸುಳ್ಯ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಪಂಜ ಕಂದಾಯ ನಿರೀಕ್ಷಕ ಶಂಕರ್ ಮತ್ತಿತರ ಸಿಬ್ಬಂದಿಗಳಿದ್ದರು.