ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಹಬ್ಬದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

ಪುತ್ತೂರು ತಾಲೂಕಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು, ಇಲ್ಲಿ ವಿವಿಧ ಪದವಿ ಕಾಲೇಜುಗಳಿಗೆ “ವಾಣಿಜ್ಯ ಹಬ್ಬ” ವನ್ನು ಮೇ 12ರಂದು ಏರ್ಪಡಿಸಲಾಯಿತು.
ಈ ಸ್ಪರ್ಧೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ಅಂತಿಮ ಪದವಿಯ 8 ವಿದ್ಯಾರ್ಥಿಗಳು ನಾಲ್ಕು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಮನೀಶ್ ಹಾಗೂ ಕೌಸಲ್ಯಾ ದ್ವಿತೀಯ ಸ್ಥಾನ ಪಡೆದಿದ್ದು, ಹ್ಯುಮನ್ ರಿಸೋರ್ಸ್ ಸ್ಪರ್ಧೆಯಲ್ಲಿ ಅಜಯ್ ಹಾಗೂ ಸಿಂಧೂರ ಇವರು ದ್ವಿತೀಯ ಸ್ಥಾನ ಪಡೆದಿದ್ದಾರೆ.