ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಶುಶ್ರೂಷಕರ ದಿನಾಚರಣೆ

0

ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆ ಮತ್ತು ತಾಲೂಕು ಆಸ್ಪತ್ರೆ ಸುಳ್ಯ ಇದರ ಸಹಯೋಗದಲ್ಲಿ ವಿಶ್ವ ಶುಶ್ರೂಷಕರ ದಿನಾಚರಣೆ ಮೇ. 19 ರಂದು ಸುಳ್ಯ ತಾಲೂಕು ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.

ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ಅಧ್ಯಕ್ಷೆ ಡಾ. ವೀಣಾ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ ಚಿದಾನಂದ, ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ ಡಾ.ನಂದಕುಮಾರ್ ಆಗಮಿಸಿ ಶುಭ ಹಾರೈಸಿದರು.
ಡಾ. ರವಿಶಂಕರ್, ಡಾ. ಅಮಿತ್ ಕುಮಾರ್, ಡಾ. ಅರ್ಚನಾ, ಡಾ ಜ್ಯೋತ್ಸ್ನ, ಡಾ.ಭವಾನಿಶಂಕರ್, ಡಾ. ಜೆ.ಪಿ. ಪಾರೆ ಮೊದಲಾದ ವೈದ್ಯರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಮೊದಲು ಗುಂಪು ಚಟುವಟಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆರೋಗ್ಯ ಮಿತ್ರ ಮುರಳಿ ಕಾರ್ಯಕ್ರಮ ನಡೆಸಿಕೊಟ್ಟರು. ಸರ್ಕಾರಿ ಆಸ್ಪತ್ರೆಯ ಶುಶ್ರೂಷಕಾಧಿಕಾರಿ ಜಯಮಾಲ ಅದೃಷ್ಟವಂತ ಶುಶ್ರೂಷಕಿ ಬಹುಮಾನ ಪಡೆದುಕೊಂಡರು.

ಡಾ. ಸೌಮ್ಯ ಐಎಂಎ ಪ್ರಾರ್ಥನೆ ಮಾಡಿದರು. ಶುಶ್ರೂಷಕಾಧಿಕಾರಿ ಸವಿತಾ ಪ್ರಾರ್ಥಿಸಿದರು. ಡಾ.ವೀಣಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ. ರಜನಿ ವಂದಿಸಿದರು.