ಇಂದು, ನಾಳೆ ಬೆಳ್ಳಾರೆ ಗೌರಿಪುರಂ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಚಂಡಿಕಾ‌ ಹೋಮ, ನಾಗದೇವರ‌ ಪ್ರತಿಷ್ಠಾ ವಾರ್ಷಿಕೋತ್ಸವ

0

ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿಯಾಗಿ ಕುನ್ನತ್ತಿಲ್ ಮುರಳೀಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ಮೇ. 26, 27ರಂದು ವಿವಿಧ ಕಾರ್ಯಕ್ರಮ ನಡೆಯಲಿದೆ. ಇಂದು ಬೆಳಿಗ್ಗೆ ಚಂಡಿಕಾ ಹೋಮ, ಸಂಜೆ 6.30ರಿಂದ‌ ಶ್ರೀ ದುರ್ಗಾಂಬಿಕಾ‌ ಭಜನಾ ಕೊಣಾಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.


ಮೇ. 27ರಂದು ಶ್ರೀ ಕ್ಷೇತ್ರದ ನಾಗಸನ್ನಿಧಿಯಲ್ಲಿ ಶ್ರೀ ನಾಗಬ್ರಹ್ಮ, ನಾಗರಾಜ, ನಾಗಕನ್ನಿಕೆಯರ ಚಿತ್ರಕೂಟ ಸಹಿತ ನಾಗದೇವರ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ.

ಬೆಳಿಗ್ಗೆ 8.00ರಿಂದ ಹಾಲು, ಸಿಯಾಳ ಅಭಿಷೇಕ ಮತ್ತು ತಂಬಿಲ ಸೇವೆ, ಸಂಜೆ 6.00ರಿಂದ ಆಶ್ಲೇಷ ಬಲಿಪೂಜೆ ನಡೆಯಲಿದೆ. ನಾಗತಂಬಿಲ‌ ಸೇವೆ ಮಾಡಿಸುವವರು ರೂ. 150/- ನ್ನು ಪಾವತಿಸಿ ಪೂಜಾ ಕಾರ್ಯದಲ್ಲಿ ಭಾಗವಹಿಸಬಹುದಾಗಿದೆ. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಕಾರ್ಯದರ್ಶಿ ಮಹಾಲಿಂಗ ಪಾಟಾಳಿ ಮತ್ತು ಪದಾಧಿಕಾರಿಗಳು, ಸದಸ್ಯರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.