ಅರಮನೆಗಯಲ್ಲಿ ಸೇತುವೆ ನಿರ್ಮಿಸುವಂತೆ ನೂತನ ಶಾಸಕರಿಗೆ ಅಂಬೇಡ್ಕರ್ ಹಿತರಕ್ಷಣಾ ಸಮಿತಿಯಿಂದ ಮನವಿ

0


ಶಾಸಕರಿಂದ ಪರಿಶೀಲನೆ – ಆದ್ಯತೆಯಲ್ಲಿ ಸೇತುವೆ ನಿರ್ಮಾಣದ ಭರವಸೆ

ಅಡ್ತಲೆಯಲ್ಲಿ ನಡೆದ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಅರಮನೆಗಯ ಸೇತುವೆ ನಿರ್ಮಿಸುವಂತೆ ಅಂಬೇಡ್ಕರ್ ರಕ್ಷಣಾ ಸಮಿತಿಯಿಂದ ಜೂ.10ರಂದು ಮನವಿ ನೀಡಲಾಯಿತು.

ಮನವಿಗೆ ಸ್ಪಂದಿಸಿದ ಶಾಸಕರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಸರಕಾರದಿಂದ ಬರುವ ಮೊದಲ ಅನುದಾನದಲ್ಲಿ ಸೇತುವೆ ನಿರ್ಮಿಸುವ ಭರವಸೆಯನ್ನು ನೀಡಿದರು. ಹಾಗೂ ಈ ವರ್ಷದ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ದುರಸ್ಥಿ ಕಾರ್ಯವನ್ನು ಪಂಚಾಯತ್ ಮುಖಾಂತರ ಮಾಡಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿ. ಜೆ. ಪಿ. ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ಕೇಶವ ಅಡ್ತಲೆ, ಮರ್ಕಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಶೇಖರ ಚೋಡಿಪಣೆ, ವಿನಯ ಬೆದ್ರುಪಣೆ ಮತ್ತು ಅಂಬೇಡ್ಕರ್ ರಕ್ಷಣಾ ವೇದಿಕೆಯ ಸದಸ್ಯರು, ನಾಗರಿಕರು ಉಪಸ್ಥಿತರಿದ್ದರು.