ಪೆರುವಾಜೆಯಲ್ಲಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

0

ಶಾಸಕ ಸ್ಥಾನಕ್ಕೆ ನ್ಯಾಯ ಕೊಡಿಸುವೆ : ಭಾಗೀರಥಿ ಮುರುಳ್ಯ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ವಿಶೇಷ ಕಾರ್ಯಕಾರಣಿ ಸಭೆಯು ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ಇಂದು ನಡೆಯಿತು.

ಶಾಸಕರಾದ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಉದ್ಘಾಟನಾ ಮಾತುಗಳನ್ನಾಡಿದ ನೂತನ ಶಾಸಕರು ಪಕ್ಷ ದೊಡ್ಡ ಹೆಮ್ಮರವಾಗಿ ಬೆಳೆಯಲು ಕಾರಣಕರ್ತರಾದ ಹಿರಿಯರ ಬಲಿದಾನವನ್ನು ನೆನೆಸಿಕೊಂಡರು.

ಶಾಸಕ ಸ್ಥಾನಕ್ಕೆ ಆಭ್ಯರ್ಥಿಯಾಗಿ ನನನ್ನು ಮಂಡಲ ಸಮಿತಿಯು ಗಟ್ಟಿ‌ನಿರ್ಧಾರದಿಂದ ಆಯ್ಕೆ ಮಾಡಿದೆ. ಶಾಸಕ ಸ್ಥಾನಕ್ಕೆ ನ್ಯಾಯ ಕೊಡಿಸುವ ಕೆಲಸವನ್ನು ಖಂಡಿತವಾಗಿಯೂ ಕೆಲಸಮಾಡುತ್ತೆನೆ ಎಂದು ತಿಳಿಸಿದರು.

ಬೇರೆ ಕ್ಷೇತ್ರದ ಶಾಸಕರು ಅವರ ಪಕ್ಷದ ಚಟುವಟಿಕೆಗಳನ್ನು ಮಾಡಲಿ. ನನ್ನ ಕ್ಷೇತ್ರದಲ್ಲಿ ಏನು ಕೆಲಸ ಮಾಡಬೇಕು ಎಂದು ನನಗೆ ಗೊತ್ತಿದೆ. ಅಭಿವೃದ್ಧಿವಿಚಾರದಲ್ಲಿ ಅಗತ್ಯವಿದ್ದರೆ ನಿಮ್ಮ ಸಹಕಾರವನ್ನು ಬಯಸುತ್ತೇವರ ಎಂದ ಅವರು ಮುಂದಿನ‌ಕೆಲಸ ಕಾರ್ಯಗಳನ್ನು ನಿರ್ವಹಿಸಲು ಕಾರ್ಯಕರ್ತರ ಸಲಹೆ, ಸಹಕಾರವನ್ನು ಕೋರಿದರು.

ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಭಾಜಪ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ಸಂದರ್ಭದಲ್ಲಿ ರಾಮದಾಸ್ ಬಂಟ್ವಾಳ ಜಿಲ್ಲಾ ಪ್ರಧಾನಕಾರ್ಯದರ್ಶಿಗಳು, ಬೂಡಿಯಾರ್ ರಾಧಾಕೃಷ್ಣ ರೈ ಜಿಲ್ಲಾ ಉಪಾಧ್ಯಕ್ಷರು ಮತ್ತು ಸುಳ್ಯ ಪ್ರಭಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಬೋಧ್ ಶೆಟ್ಟಿ ಮೆನಾಲ ಸ್ವಾಗತಿಸಿ, ಇಂದಿರಾ ಬಿ.ಕೆ ವಂದಿಸಿದರು, ರಾಕೇಶ್ ರೈ ಕೆಡೆಂಜಿ ನಿರೂಪಿಸಿದರು. ಪಕ್ಷದ ಅಪೇಕ್ಷಿತ ಕಾರ್ಯಕರ್ತರು ಮತ್ತು ಪ್ರಮುಖರು ಉಪಸ್ಥಿತರಿದ್ದರು.