ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ಸರ್ಕಲ್ ಸಮಿತಿ ಅಧ್ಯಕ್ಷರಾಗಿ ಹಾಜಿ ಉಮ್ಮರ್ ಪಿ. ಎ.

0

ಕರ್ನಾಟಕ ಮುಸ್ಲಿಂ ಜಮಾಅತ್ (ಕೆ ಎಂ ಜೆ ) ಸುಳ್ಯ ಸರ್ಕಲ್ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಜಿ ಉಮ್ಮರ್ ಪಿ ಎ ಗೂನಡ್ಕರವರು ಆಯ್ಕೆಯಾಗಿದ್ದಾರೆ.


ಸರ್ಕಲ್ ಸಮಿತಿ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಬೀಜಕೊಚ್ಚಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಝೋನಲ್ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಇಂದು ನಡೆದ ಸರ್ಕಲ್ ಸಮಿತಿ ಮಾಸಿಕ ಸಭೆಯಲ್ಲಿ ಉಮ್ಮರ್ ರವರನ್ನು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.


ವಿವಿಧ ಸಂಘ ಸಂಸ್ಥೆಗಳಲ್ಲಿ, ಧಾರ್ಮಿಕ ಮತ್ತು ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಉಮ್ಮರ್ ರವರು ಸುಳ್ಯ ಗೂನಡ್ಕ ನಿವಾಸಿಯಾಗಿದ್ದಾರೆ.