8 ತಿಂಗಳಲ್ಲಿ ಸುಳ್ಯದ 110 ಕೆ.ವಿ., ಡಿಸೆಂಬರ್ ಅಂತ್ಯಕ್ಕೆ ತಾಲೂಕು ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣ : ಶಾಸಕಿ ಭಾಗೀರಥಿ ಮುರುಳ್ಯ ವಿಶ್ವಾಸ

0

ಮುಂದಿನ ೮ ತಿಂಗಳೊಳಗೆ ಸುಳ್ಯದ ೧೧೦ ಕೆ.ವಿ. ವಿದ್ಯುತ್ ಕಾಮಗಾರಿ ಪೂರ್ಣಗೊಳ್ಳಲಿದ್ದು, ಈ ವರ್ಷದ ಡಿಸೆಂಬರ್ ಅಂತ್ಯಕ್ಕೆ ತಾಲೂಕು ಅಂಬೇಡ್ಕರ್ ಭವನದ ಕಾಮಗಾರಿಯೂ ಪೂರ್ತಿಗೊಳ್ಳಲಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.


ಜೂ.೧೭ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಬಿಜೆಪಿ ಮಂಡಲ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಶಾಸಕರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.


೧೧೦ ಕೆ.ವಿ. ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ೮ ತಿಂಗಳು ಇದೆ. ನಾನು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಳಿಸಲು ಹೇಳಿದ್ದೇನೆ. ಆ ಸಮಯದೊಳಗೆ ಅಧಿಕಾರಿಗಳು ಕೆಲಸ ಮಾಡಿ ಮುಗಿಸುತ್ತಾರೆಂಬ ವಿಶ್ವಾಸ ಇದೆ ಎಂದು ಅವರು ಹೇಳಿದರು.


ಸುಳ್ಯ ತಾಲೂಕು ಅಂಬೇಡ್ಕರ್ ಭವನ ಕಾಮಗಾರಿ ಪ್ರಗತಿಯಲ್ಲಿದೆ. ಈ ವರ್ಷದ ಡಿಸೆಂಬರ್ ತಿಂಗಳಿಗೆ ಕೆಲಸ ಪೂರ್ತಿಗೊಂಡು ಲೋಕಾರ್ಪಣೆ ಮಾಡುತ್ತೇವೆ ಎಂದು ಅವರು ಹೇಳಿದರು.
ಸುಳ್ಯ ತಾಲೂಕು ಕ್ರೀಡಾಂಗಣ ಶ್ವಾಶ್ವತ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಅಲ್ಲಿ ತಡೆಗೋಡೆ ಮಾಡಲಾಗುವುದು ಎಂದು ಶಾಸಕರು ಹಾಗೂ ಬಿಜೆಪಿ ಮಂಡಲಾಧ್ಯಕ್ಷರು ತಿಳಿಸಿದರು.