ಅಡ್ಪಂಗಾಯ ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ಕಾರ್ಯಕ್ರಮ,ಶ್ರೀ ದುರ್ಗಾಪೂಜೆ

0

ಅರುಣ್ ಪುತ್ತಿಲ, ಯಶ್ವಿತ್ ಕಾಳಂಮನೆ , ಚಂದ್ರಾವತಿ ಬಡ್ಡಡ್ಕರವರಿಗೆ ಸನ್ಮಾನ

ಅಡ್ಪಂಗಾಯ ಅಯ್ಯಪ್ಪ ಮಂದಿರದಲ್ಲಿ ಮಿಥುನ ಸಂಕ್ರಮಣದ ಪ್ರಯುಕ್ತ ಭಜನಾ ಕಾರ್ಯಕ್ರಮ ,ಶ್ರೀ ದುರ್ಗಾಪೂಜೆ ಹಾಗೂ ವಿವಿಧ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜೂ.17 ರಂದು ನಡೆಯಿತು.


ಜಾಲ್ಸೂರು ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿಯವರಿಂದ ಭಜನೆ ನಡೆಯಿತು.
ನಂತರ ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಶಿವಪ್ರಕಾಶ್ ಗುರುಸ್ವಾಮಿಗಳ ನೇತೃತ್ವದಲ್ಲಿ ದೀಪಾರಾಧನೆ ನಡೆಯಿತು.
ಶ್ರೀ ದುರ್ಗಾ ಪೂಜೆ ನಡೆಯಿತು.


ಸನ್ಮಾನ


ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅರುಣ್ ಕುಮಾರ್ ಪುತ್ತಿಲ,ಸುದ್ದಿ ಪತ್ರಿಕೆ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ,ಸಾಹಿತಿ ಚಂದ್ರಾವತಿ ಬಡ್ಡಡ್ಕ ರವರನ್ನು ಗುರುಸ್ವಾಮಿ ಶಿವಪ್ರಕಾಶ್ ಅಡ್ಪಂಗಾಯರವರು ಶಾಲು ಹೊದಿಸಿ,ಫಲ,ಪುಷ್ಪ,ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಅಯ್ಯಪ್ಪ ವೃತಧಾರಿಗಳು,ಭಕ್ತಾದಿಗಳು ಉಪಸ್ಥಿತರಿದ್ದರು.
ನಂತರ ಭಕ್ತಾದಿಗಳಿಗೆ ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.