ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನ ಆಚರಣೆ

0

ವಿಶ್ವ ಯೋಗ ದಿನವಾದ ಇಂದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾದ ವಿಶ್ವನಾಥ ನಡುತೋಟ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಯೋಗದ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು.

ವಿದ್ಯಾರ್ಥಿಗಳು ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂರ್ಕೀತ್ ಹೆಬ್ಬಾರ್ ಹಾಗೂ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.