ಕಲ್ಮಕಾರು ಶಾಲೆಗೆ ಪ್ರಿಂಟರ್ ಹಾಗೂ ಧ್ವನಿವರ್ಧಕ ಕೊಡುಗೆ

0

ಸುಬ್ರಹ್ಮಣ್ಯ ರೋಟರಿ ಕ್ಲಬ್ ಸಹಯೋಗದೊಂದಿಗೆ ಬಾಲಕೃಷ್ಣ ಪೈ ಹಾಗೂ ಸೌಮ್ಯ ಬಿ ಪೈ ಇವರ ಬಂಧುಗಳಾದ ಬೆಂಗಳೂರಿನ ಸುಮನ ಸದಾನಂದ ಶಿರಾಲಿ ಇವರ ಸ್ಮರಣಾರ್ಥ ಸದಾನಂದ ಶಿರಾಲಿ ಇವರು ಜೂ.15 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಕಾರು ಇಲ್ಲಿಗೆ ಪ್ರಿಂಟರ್ ಹಾಗೂ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಿದರು.


ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್‌ನ ಅಧ್ಯಕ್ಷ ಗೋಪಾಲ್ ಎಣ್ಣೆಮಜಲು ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ಕ್ಲಬ್‌ನ ಪೂರ್ವಾಧ್ಯರಾದ ಬಾಲಕೃಷ್ಣ ಪೈ ಹಾಗೂ ಸೌಮ್ಯ ಬಿ ಪೈ, ನಿಯೋಜಿತ ಅಧ್ಯಕ್ಷ ಪ್ರಶಾಂತ್ ಕೋಡಿಬೈಲು, ಎಸ್‌ಡಿಎಂಸಿ ಅಧ್ಯಕ್ಷರಾದ ಬೆಳ್ಯಪ್ಪ ಮೆಂಟೆಕಜೆ, ಶಾಲಾ ಮುಖ್ಯ ಶಿಕ್ಷಕಿ ಮಾಲಿನಿ ಕೆ.ಎಸ್ ಉಪಸ್ಥಿತರಿದ್ದರು.


ಶಾಲಾ ಮುಖ್ಯ ಶಿಕ್ಷಕಿ ಮಾಲಿನಿ ಕೆ.ಎಸ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕ ಅರಂವಿದ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ನೀಡಿದರು.
ಈ ಸಂಧರ್ಭದಲ್ಲಿ ಪೂರ್ವಧ್ಯಕ್ಷರುಗಳಾದ ಉಮೇಶ್ ಕೆ.ಎನ್, ಕಿಶೋರ್ ಕೂಜುಗೋಡು, ಲೋಕೇಶ್ ಬಿಎನ್ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕರು ಮತ್ತು ಪೋಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ರೋಟರಿ ಕ್ಲಬ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ಹಂಚಲಾಯಿತು.