ವಿನೋಬನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಔಷಧೀಯ ಗಿಡಗಳ ನೆಡುವ ಕಾರ್ಯಕ್ರಮ

0

ಅಡ್ಕಾರಿನ ವಿನೋಬನಗರದ ಗ್ರಾಮದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ” ವಿವೇಕ ಸಂಜೀವಿನಿ ” ಔಷಧಿ ಸಸ್ಯಗಳ ಸಂಕುಲದ ಸಂರಕ್ಷಣೆಯ ಉದ್ದೇಶದಿಂದ ಔಷದೀಯ ಗಿಡಗಳನ್ನು ನೆಡುವ ಕಾರ್ಯಕ್ರಮ ಜೂ. 21ರಂದು ನಡೆಯಿತು.

ಪ್ರೌಢಶಾಲಾ ಮುಖ್ಯೋಪಾಧ್ಯಯರಾದ ಗಿರೀಶ್ ಕುಮಾರ್, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹಲವು ಜಾತಿಯ ಔಷಧೀಯ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡುವ ಮೂಲಕ ಆ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಅದರ ಬಳಕೆ ಹಾಗೂ ಪರಿಸರ ಕಾಳಜಿ ಬಗ್ಗೆ ಮಾಹಿತಿಯನ್ನು ನೀಡಿದರು.