ನಿಡುಬೆ : ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ವೀಲ್ ಚಯರ್ ಹಸ್ತಾಂತರ

0

ಬೆಳ್ಳಾರೆ ವಲಯದ ಐವರ್ನಾಡು ಕಾರ್ಯಕ್ಷೇತ್ರದ ನಿಡುಬೆ ಎಂಬಲ್ಲಿ ವಾಸವಾಗಿರುವ ಸೋಮಶೇಖರ್ ಅವರು ಎದ್ದು ನಡೆಯಲಾಗದ ಅಸಹಾಯಕ ಸ್ಥಿತಿಯಲ್ಲಿದ್ದು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಲಾದ ವೀಲ್ ಚಯರನ್ನು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಜೆ.ಟಿ.ವೆಂಕಪ್ಪ ಗೌಡ ಮತ್ತು ಒಕ್ಕೂಟದ ಅಧ್ಯಕ್ಷರಾದ ವೇದ ಹೆಚ್.ರೈ ಮತ್ತು ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ ಮತ್ತು ಸೇವಾಪ್ರತಿನಿಧಿ ಶ್ರೀಮತಿ ವನಿತಾರವರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.