ಸುಳ್ಯ ತಾಲೂಕು ಕೆ.ಜೆ.ಯು. ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕುರಿತು ಪೂರ್ವಭಾವಿ ಸಭೆ

0

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ನಡೆಸುವ ಕುರಿತು ಪೂರ್ವಭಾವಿ ಸಭೆಯು ಸುಳ್ಯದ ರಂಗಮಯೂರಿ ಕಲಾಶಾಲೆಯ ಸಭಾಭವನದಲ್ಲಿ ಜೂ.23ರಂದು ಜರುಗಿತು.


ಕೆ.ಜೆ‌.ಯು. ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಕೆ‌.ಜೆ.ಯು. ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರು ಪತ್ರಿಕಾ ದಿನಾಚರಣೆ ಆಚರಣೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.


ಕೆ‌.ಜೆ.ಯು. ವತಿಯಿಂದ ಈ ಬಾರಿಯ ಪತ್ರಿಕಾ ದಿನಾಚರಣೆಯನ್ನು ಜು.4ರಂದು ಸುಳ್ಯದ ಪ್ರೆಸ್ ಕ್ಲಬ್ ಸಭಾಭವನದಲ್ಲಿ ನಡೆಸುವುದೆಂದು ಸರ್ವ ಸದಸ್ಯರ ವತಿಯಿಂದ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೆ‌.ಜೆ.ಯು. ಸುಳ್ಯ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ರಮೇಶ್ ನೀರಬಿದಿರೆ ಸ್ವಾಗತಿಸಿ, ಕೋಶಾಧಿಕಾರಿ ಶ್ರೀಮತಿ ಜಯಶ್ರೀ ಕೊಯಿಂಗೋಡಿ ವಂದಿಸಿದರು.