ಸಂಧ್ಯಾ ಚೇತನ ಹಿರಿಯ ನಾಗರಿಕರ ಸಂಘದ ಮಹಾಸಭೆ

0

ರೋ.ಗಣೇಶ ಶರ್ಮ ಸುಳ್ಯ ಹಾಗೂ ಶ್ರೀಮತಿ ಸುಮಾ ಸುಬ್ಬರಾವ್ ರವರಿಗೆ ಸನ್ಮಾನ

ಸಂಧ್ಯಾ ಚೇತನ ಸುಳ್ಯ ತಾಲೂಕು ಹಿರಿಯ ನಾಗರಿಕರ ಸಂಘದ ಮಹಾಸಭೆಯು ಜೂ.23 ರಂದು ಜಟ್ಟಿಪಳ್ಳ ಕಾನತ್ತಿಲ ರಸ್ತೆಯಲ್ಲಿರುವ ಹಿರಿಯರ ಮನೆಯಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಬಾಪೂ ಸಾಹೇಬ್ ಅಧ್ಯಕ್ಷತೆ ವಹಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಗಿರೀಶ್ ಭಾರಧ್ವಜ್, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ, ಎಪಿಎಂಸಿ ಮಾಜಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಪ್ರಗತಿಪರ ಕೃಷಿಕ ಸೂಂತೋಡು ಜನಾರ್ಧನ ಗೌಡ ರವರ ಭಾಗವಹಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಡಾ.ರಂಗಯ್ಯ, ಕಾರ್ಯದರ್ಶಿ ರಾಮಚಂದ್ರ ಪೆಲ್ತಡ್ಕ, ಖಜಾಂಜಿ ಚಂದ್ರಹಾಸ ಕಡ್ಯದ ಉಪಸ್ಥಿತರಿದ್ದರು. ಇದೇ ಸಂದರ್ಭ ಹಿರಿಯ ಸಾಧಕರಾದ ಗಣೇಶ ಶರ್ಮ ಸುಳ್ಯ, ಶ್ರೀಮತಿ ಸುಮಾ ಸುಬ್ಬರಾವ್ ದೊಡ್ಡತೋಟ ರವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಶ್ರೀಮತಿ ಯಮುನಾ ಪ್ರಾರ್ಥಿಸಿದರು,ಚೆನ್ನಕೇಶವ ಜಾಲ್ಸೂರು ವಂದಿಸಿದರು, ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.

ಇದೇ ಸಂದರ್ಭ ಮುಂದಿನ ಅವಧಿಗೆ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಡಾ.ರಂಗಯ್ಯ, ಅಧ್ಯಕ್ಷರಾಗಿ ಪ್ರಭಾಕರನ್ ನಾಯರ್, ಕಾರ್ಯದರ್ಶಿಯಾಗಿ ಚೆನ್ನಕೇಶವ ಜಾಲ್ಸೂರು, ಖಜಾಂಜಿಯಾಗಿ ರಾಮಚಂದ್ರ ಪೆಲ್ತಡ್ಕ, ಜೊತೆ ಕಾರ್ಯದರ್ಶಿಯಾಗಿ ಪ್ರೋ.ದಾಮೋದರ ಗೌಡರನ್ನು ಆಯ್ಕೆ ಮಾಡಲಾಯಿತು.