ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಡೆಂಗ್ಯೂ ಜ್ವರ ತಡೆಗಟ್ಟುವ ಬಗ್ಗೆ ಮುಂಜಾಗ್ರತಾ ಕಾರ್ಯಕ್ರಮ

0

ಜ್ಞಾನದೀಪ ಶಾಲೆ ಎಲಿಮಲೆಯಲ್ಲಿ ಮಕ್ಕಳಿಗೆ ಡೆಂಗ್ಯೂ ಮತ್ತು ಮಲೇರಿಯಾ ಕಾಯಿಲೆಗಳು ಹರಡದಂತೆ ಜಾಗೃತಿಯನ್ನು ಜೂ. 23 ರಂದು ಮೂಡಿಸಲಾಯಿತು.

ಶಾಲಾ ಸಹ ಶಿಕ್ಷಕಿ ಪೂಜಾ ಅವರು ಮಕ್ಕಳಿಗೆ ಡೆಂಗ್ಯೂ ಮತ್ತು ಮಲೇರಿಯ ಕಾಯಿಲೆಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಗದಾಧರ ಬಾಳುಗೋಡು ಹಾಗೂ ಇತರ ಶಿಕ್ಷಕರು ಉಪಸ್ಥಿತರಿದ್ದರು.